ಚಾ.ನಗರ ಲೋಕಸಭಾ ಕ್ಷೇತ್ರದಿಂದ ನಾನು ಪ್ರಮುಖ ಆಕಾಂಕ್ಷಿ

ಕಾಂಗ್ರೆಸ್ ನೇತೃತ್ವದ ಇಂಡಿಯ ಮೈತ್ರಿಕೂಟ ಸರ್ಕಾರ ರಚನೆ ಖಚಿತ: ಜಿ.ಸಿ. ಕಿರಣ್
ಚಾಮರಾಜನಗರ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ನೇತೃತ್ವದ ಇಂಡಿಯಾ ಮೈತ್ರಿಕೂಟ ಹೆಚ್ಚಿನ ಬಹುಮತಗಳನ್ನು ಪಡೆದು ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ರಾಜ್ಯ ಕಾರ್ಯದರ್ಶಿ ಹಾಗೂ ಚಾಮರಾಜನಗರ ಲೋಕಸಭಾ ಕ್ಷೇತ್ರದ ಆಕಾಂಕ್ಷಿ ಜಿ.ಸಿ.ಕಿರಣ್ ತಿಳಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ಇಂದಿನ ದೇಶದ ರಾಜಕೀಯ ಪರಿಸ್ಥಿತಿ ಮತ್ತು ಕಾಂಗ್ರೆಸ್ ಪಕ್ಷದಿಂದ ಲೋಕಸಭಾ ಚುನಾವಣೆಯಲ್ಲಿ ಸಂಘಟನೆ, ಪ್ರಧಾನಿ ನರೇಂದ್ರ ಮೋದಿ ಅವರು ಹತ್ತು ವರ್ಷಗಳ ಆಡಳಿತದ ವೈಪಲ್ಯವು ವರದಾನವಾಗಲಿದೆ ಎಂದರು.

ಕೇಂದ್ರದಲ್ಲಿ ಎರಡು ಅವಧಿಯಲ್ಲಿ ಬಿಜೆಪಿ ಸರ್ಕಾರದ ಪ್ರಧಾನಿ ನರೇಂದ್ರಮೋದಿ ರವರು ಸಾಧನೆ ಶೂನ್ಯ. ದೇಶದಲ್ಲಿ ಇಂದು ಅರ್ಥಿಕ ಪರಿಸ್ಥಿತಿ ಕುಸಿದಿದೆ, ಬಡತನ, ನಿರುದ್ಯೋಗ ತಾಂಡವಾಡುತ್ತಿದೆ ಇದೆಲ್ಲ ಹೊಣೆ ಕೇಂದ್ರದ ಬಿಜೆಪಿ ಸರ್ಕಾರ. ವಿದೇಶದಲ್ಲಿ ಬ್ಯಾಂಕಿನಲ್ಲಿ ಇರುವ ಕಪ್ಪು ಹಣ ವಾಪಸ್ಸು ತಂದು ದೇಶದ ಜನರ ಪ್ರತಿ ಅಕೌಂಟ್ ಗಳಿಗೆ 15ಲಕ್ಷ ರೂಪಾಯಿ ಪಾವತಿ ಮಾಡಲಾಗುತ್ತದೆ ಎಂದು ಜನರಿಗೆ ಸುಳ್ಳು ಹೇಳಿ ಅಧಿಕಾರ ಪಡೆದು ಮೋಸ ಮಾಡಿದೆ ಎಂದರು.

ಪ್ರತಿ ವರ್ಷ ಯುವಕರಿಗೆ 2ಕೋಟಿ ಉದ್ಯೋಗ ನೀಡಲಾಗುತ್ತದೆ ಎಂದು ಹೇಳಿದ್ದರು, 2 ಲಕ್ಷ ಸಹ ಉದ್ಯೋಗ ನೀಡಲಿಲ್ಲ. ನೋಟು ಅಮ್ಯಾನೀಕರಣದಿಂದ ಬಡವರು ಬಾಳು ಬೀದಿಗೆ ಬಂತು ಬ್ಯಾಂಕಿನ ಸರತಿ ಸಾಲಿನಲ್ಲಿ ನಿಂತು ಪ್ರಾಣ ಬಿಟ್ಟವರು ನೂರಾರು ಜನರು ಇದ್ದಾರೆ.
ಕರ್ನಾಟಕ ರಾಜ್ಯದಲ್ಲಿ ಹಲವಾರು ಜಿಲ್ಲೆಗಳಲ್ಲಿ ಭೀಕರ ಬರಗಾಲವಿದೆ ಅದರೆ ಕೇಂದ್ರದಿಂದ ನಯಾ ಬಿಡಿಕಾಸು ಪರಿಹಾರ ಸಿಕ್ಕಿಲ್ಲ. ಕೇಂದ್ರ ಸರ್ಕಾರ ಜನ ವಿರೋಧಿ, ಆಡಳಿತ ವಿರೋಧಿಯಾಗಿದೆ. ರಾಜ್ಯದಲ್ಲಿ ಕಳೆದ ಆರು ತಿಂಗಳ ಸಂಪೂರ್ಣ ಬಹುಮತದಿಂದ ಆಯ್ಕೆಯಾದ ಸರ್ಕಾರ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದೆ ಚುನಾವಣೆ ಪೂರ್ವದಲ್ಲಿ 5ಗ್ಯಾರಂಟಿ ಯೋಜನೆಗಳು ಭರವಸೆ ನೀಡಿತ್ತು ಅಧಿಕಾರ ಬಂದ ನಂತರ ರಾಜ್ಯದ ಜನತೆಗೆ ಭರವಸೆ ಈಡೇರಿಸಿದೆ.

ರಾಜ್ಯದಲ್ಲಿ ಪ್ರತಿ ವ್ಯಕ್ತಿಗೆ 10ಕೆ.ಜಿ.ಅಕ್ಕಿ ಅನ್ನಭಾಗ್ಯ ಯೋಜನೆ, ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಹಾಗೂ ಗೃಹಲಕ್ಷ್ಮಿ ಯೋಜನೆಯಿಂದ ಪ್ರತಿ ಮನೆ ಯಾಜಮಾನಿಗೆ ಪ್ರತಿ ತಿಂಗಳು 2 ಸಾವಿರ ರೂಪಾಯಿ ಹಾಗೂ 200ಯೂನಿಟ್ ವಿದ್ಯುತ್ ಉಚಿತ ಮತ್ತು ನಿರುದ್ಯೋಗ ಯುವಕ-ಯುವತಿಯರಿಗೆ ಯುವನಿಧಿ ಮೂಲಕ ನಿರುದ್ಯೋಗ ಭತ್ಯೆ ಯೋಜನೆ ಶೀಘ್ರದಲ್ಲಿ ಜಾರಿಗೆಯಾಗಲಿದೆ ಕಿರಣ್ ಎಂದರು.

ರಾಜ್ಯದ 20 ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಲಿದೆ ಪ್ರಥಮ ಫಲಿತಾಂಶ ಚಾಮರಾಜನಗರ ಲೋಕಸಭಾ ಕ್ಷೇತ್ರ ಸುಮಾರ್ ಒಂದು ಲಕ್ಷ ಅಂತರದಲ್ಲಿ ಜಯ ಸಾಧಿಸಲಿದೆ. ನಮ್ಮ ಲೋಕಸಭಾ ಕ್ಷೇತ್ರದ ಮತದಾರರು, ಕಾಂಗ್ರೆಸ್ ಪಕ್ಷದ ಮುಖಂಡರು, ಕಾರ್ಯಕರ್ತರು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ನನ್ನನು ಒತ್ತಾಯಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಅಧಿನಾಯಕಿ ಸೋನಿಯಗಾಂಧಿ, ಯುವ ನಾಯಕ ರಾಹುಲ್ ಗಾಂಧೀಜಿರವರು, ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆರವರು ಮತ್ತು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು, ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯರವರು ಹಾಗೂ ಸಚಿವರು, ಮೈಸೂರು ಉಸ್ತುವಾರಿಗಳಾದ ಹೆಚ್.ಸಿ.ಮಹದೇವಪ್ಪರವರು ಪಕ್ಷದ ಹೈಕಮಾಂಡ್ ಸೂಚನೆ ನೀಡಿದರೆ ನಾನು ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಹೇಳಿದರು.
ಗೊಷ್ಠಿಯಲ್ಲಿ ಕಾಂಗ್ರೆಸ್ ಮುಖಂಡ ಕೇಶವಮೂರ್ತಿ ಇದ್ದರು.

Leave a Reply

Your email address will not be published. Required fields are marked *