ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆ

ಚಾಮರಾಜನಗರ: ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ೭೭ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣವನ್ನು ನೆರವೇರಿಸಿ ಮಾತನಾಡಿದ ಕುಲಪತಿಗಳಾದ ಪ್ರೊ.ಎಂ.ಆರ್.ಗಂಗಾಧರ್ ಅವರು, ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಿ ಅವರ ಆದರ್ಶಗಳನ್ನು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕು. ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನದಿಂದಾಗಿ ನಮ್ಮ ದೇಶಕ್ಕೆ ಸ್ವಾತಂತ್ರ್ಯ ದೊರೆತಿದ್ದು, ಅದನ್ನು ದೇಶದೋದ್ಧಾರಕ್ಕಾಗಿ, ರಾಷ್ಟ್ರೋತ್ಥಾನಕ್ಕಾಗಿ ಭಾರತದ ಪ್ರತೀ ನಾಗರಿಕರು ತೊಡಗಿಸಿಕೊಳ್ಳಬೇಕು ದೇಶದ ಸರ್ವತೋಮುಖ ಪ್ರಗತಿಗೆ ಇಂದಿನ ಯುವ ಜನತೆ ನಿರಂತರವಾಗಿ ಶ್ರಮಿಸಬೇಕಿದೆ ಎಂದು ತಿಳಿಸಿದರು.


ಕಾರ್ಯಕ್ರಮದಲ್ಲಿ ಮೌಲ್ಯಮಾಪನ ಕುಲಸಚಿವರಾದ ಪ್ರೊ..ಪಿ.ಮಾದೇಶ್, ಪಿ.ಎಂ.ಇ.ಬಿ ನಿರ್ದೇಶಕ ಡಾ.ಸಿದ್ಧರಾಜು, ಹಾಗೂ ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

Leave a Reply

Your email address will not be published. Required fields are marked *