ಜವಾಹರಲಾಲ್ ನೆಹರು ಜಯಂತಿ : ಜಿಲ್ಲಾ ಯುವ ಕಾಂಗ್ರೆಸ್ ನಿಂದ ಮಕ್ಕಳಿಗೆ ಸಿಹಿ ವಿತರಣೆ

ಚಾಮರಾಜನಗರ: ಭಾರತದ ಪ್ರಪ್ರಥಮ ಪ್ರಧಾನ ಮಂತ್ರಿಗಳಾಧ ಜವಾಹರಲಾಲ್ ನೆಹರು ಅವರ ಜಯಂತಿ ಅಂಗವಾಗಿ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಶಾಲಾ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಬಹಳ ಅರ್ಥ ಪೂರ್ಣವಾಗಿ ಆಚರಣೆ ಮಾಡಲಾಯಿತು.

ನಗರದ ಹೌಸಿಂಗ್ ಬೋರ್ಡ್ ಕಾಲೋನಿಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ಹಂಚಿ ತಮ್ಮ ನೆಚ್ಚಿನ ಪ್ರಧಾನಿಗಳಾದ ಜವಹಾರ್ ನೆಹರು ಅವರಿಗ ಶುಭಾಶಯ ಕೋರುವ ಜೊತೆಗೆ ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಿದರು.

ಯುವ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ಅಜೀಜ್ ವಿದ್ಯಾರ್ಥಿಗಳಿಗೆ ಸಿಹಿ ವಿತರಣೆ ಮಾಡಿ ಮಾತನಾಡಿ, ಜವಾಹರ್ ನೆಹರು ಅವರಿಗೆ ಮಕ್ಕಳೆಂದರೆ ಬಹಳ ಪ್ರೀತಿ . ಹೀಗಾಗಿ ಅವರು ತಮ್ಮ ಜಯಂತಿಯನ್ನು ಮಕ್ಕಳ ದಿನಾಚರಣೆಯನ್ನಾಗಿ ಆಚರಣೆ ಮಾಡುವಂತೆ ತಿಳಿಸಿದ್ದರು.

ಆದರಂತೆ ಜವಹಾರ್ ನೆಹರು ಅವರ ಜನ್ಮ ದಿನವನ್ನು ಮಕ್ಕಳ ದಿನಾಚರಣೆಯನ್ನು ಅಚರಣೆ ಮಾಡಿಕೊಂಡು ಬರಲಾಗುತ್ತಿದೆ. ಇಂದು ನಗರದ ಹೌಸಿಂಗ್ ಬೋರ್ಡ್ ಶಾಲೆಯಲ್ಲಿರುವ ವಿದ್ಯಾರ್ಥಿಗಳಿಗೆ ಸಿಹಿ ಹಂಚಿಕೆ ಮಾಡಿ, ಮಕ್ಕಳ ದಿನಾಚರಣೆಯನ್ನು ಆಚರಣೆ ಮಾಡಿದ್ದೇವೆ ಎಂದರು.

ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಲ್ಲಂಬಳ್ಳಿ ನಾಗೇಂದ್ರ ಮಾತನಾಡಿ, ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಹೀಗಾಗಿ ಮಕ್ಕಳ ಆರೋಗ್ಯ, ಶಿಕ್ಷಣ ಹಾಗೂ ಉತ್ತಮ ಭವಿಷ್ಯವನ್ನು ರೂಪಿಸುವ ಮೂಲಕ ಮಕ್ಕಳ ದಿನಚರಣೆಯನ್ನು ಆಚರಣೆ ಮಾಡೋಣ. ನೆಹರು ಅವರು ದೇಶ ಕಂಡು ಅತ್ಯುತ್ತಮ ಪ್ರಧಾನಿಗಳ ಅದರ ಅದರ್ಶ ಹಾಗೂ ತತ್ವಗಳನ್ನು ಮೈಗೂಡಿಸಿಕೊಳ್ಳೋಣ ಎಂದರು.

ಕಾರ್ಯಕ್ರಮದಲ್ಲಿ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆಲ್ಲಂಬಳ್ಳಿ ಸೋಮಶೇಖರ್, ಕಾರ್ಯಾಧ್ಯಕ್ಷ ಹೊಸಹಳ್ಳಿ ಮಧುಸೂಧನ್, ಕಾರ್ಯದರ್ಶಿ ಗಳಾದ ಅರಕಲವಾಡಿ ಸೋಮೇಶ್, ಜುಬೇರ್‍ವುಲ್ಲ ಹಕ್, ಇಮ್ರಾನ್ ಪಾಷಾ, ಮುಖ್ಯ ಶಿಕ್ಷಕಿ ಮಾಲಿನಿ, ಸಹ ಶಿಕ್ಷಕರಾದ ಜೋಸೆಫ್, ಮಮತಾ, ಪಲ್ಲವಿ ಮೊದಲಾದವರು ಇದ್ದರು.

Leave a Reply

Your email address will not be published. Required fields are marked *