ಚಾಮರಾಜನಗರ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜಯಂತಿಯನ್ನು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಇಂದು ಆಚರಣೆ ಮಾಡಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ. ಮರಿಸ್ವಾಮಿ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಇಬ್ಬರು ಮಹಾಪುರುಷರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪ ನಮನ ಸಲ್ಲಿಸಿದರು. ವಂದೇ ಮಾತರಂ ಹಾಗೂ ಭಜನೆಯನ್ನು ಹಾಡುವ ಮೂಲಕ ಗಾಂಧೀಜಿಯನ್ನು ನೆನಪುಮಾಡಿಕೊಂಡರು.
ಬಳಿಕ ಮಾತನಾಡಿದ ಜಿಲ್ಲಾಧ್ಯಕ್ಷ ಪಿ. ಮರಿಸ್ವಾಮಿ, ಮಹಾÀತ್ಮಾ ಗಾಂಧೀಜಿ ಹಾಗೂ ಲಾಲ್ ಬಹುದ್ದೂರ್ ಶಾಸ್ತ್ರೀ ಅವರು ದೇಶ ಕಂಡ ಮಹಾನ್ ಪುರುಷರು, ಗಾಂಧೀಜಿ ಅವರು ಅಹಿಂಸಾ ಮಾರ್ಗದ ಮೂಲಕ ದೇಶಕ್ಕೆ ಸ್ವಾತಂತ್ರ್ಯ ತಂದು ಕೊಟ್ಟರು. ಅವರು ತತ್ವ ಅದರ್ಶಗಳಡಿಯಲ್ಲಿ ಕಾಂಗ್ರೆಸ್ ಆಡಳಿತ ನಡೆಸಿ, ದೇಶದ ಸರ್ವಾಂಗೀಣ ಅಭಿವೃದ್ದಿಗೆ ಶ್ರಮಿಸುತ್ತಿದೆ. ಗಾಂಧಿ ಮಾರ್ಗದಲ್ಲಿ ಎಲ್ಲಾ ಧರ್ಮಗಳು ಹಾಗು ಜಾತಿಗಳನ್ನು ಒಗ್ಗಟ್ಟಿನಿಂದ ತೆಗೆದುಕೊಂಡುವ ಹೋಗುವ ಉತ್ತಮ ಆಡಳಿvವನ್ನು ಸಿಎಂ ಸಿದ್ದರಾಮಯ್ಯ ಅವರು ನೀಡುತ್ತಿದ್ದಾರೆ ಎಂದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ. ರವಿಕುಮಋ ಮಾತನಾಡಿ, ಮಹಾತ್ಮ ಗಾಂಧೀಜಿ ಅವರ ಅದರ್ಶಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿದೆ. ಗಾಂಧೀಜಿ ಅವರು ಬ್ರಿಟಿಷರ ವಿರುದ್ದ ಅಹಿಂಸಾ ಚಳವಳಿ, ಅಸಹಕಾರ ಚಳವಳಿಗಳನ್ನು ಮಾಡುವ ಮೂಲಕ ಸ್ವಾತಂತ್ರವನನ್ನು ತಂದು ಕೊಟ್ಟರು. ಅವರ ಸತ್ಯ ಮಾರ್ಗವನ್ನು ನಾವೆಲ್ಲರು ಅಳವಡಿಸಿಕೊಳ್ಳುವ ಮೂಲಕ ಸನ್ಮಾರ್ಗದಲ್ಲಿ ನಡೆಯೋಣ ಎಂದರು.
ಮಹಾತ್ಮ ಗಾಂಧಿ ಅವರು ವಿಶ್ವವೇ ಒಪ್ಪುವ ನಾಯಕರು. ಅವರ ವಿಶ್ವನಾಯಕರಾಗುವ ಜೊತೆಗೆ ಪ್ರತಿಯೊಬ್ಬರು ಗಾಂಧೀಜಿ ಅವರ ತತ್ವ ಸಿದ್ದಾಂತಗಳನ್ನು ಮೈಗೂಡಿಸಿಕೊಳ್ಳಬೇಕಾಗಿದೆ. ಅವರ ಜೀವನ ಚರಿತ್ರೆಯೇ ದಾರಿದೀಪವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ. ರವಿಕುಮಾರ್, ಬ್ಲಾಕ್ ಅಧ್ಯಕ್ಷÀ ಮಹಮದ್ ಅಸ್ಗರ್, ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅಪ್ಜಲ್ ಷರೀಪ್, ಜಿಲ್ಲಾ ವಕ್ತಾರ ಕೆರೆಹಳ್ಳೀ ನವೀನ್, ಜಿ.ಪಂ. ಮಾಜಿ ಸದಸ್ಯರಾದ ಕೆ.ಪಿ. ಸದಾಶಿವಮೂರ್ತಿ, ಪು. ಶ್ರೀನಿವಾಸನಾಯಕ, ಎಸ್ಸಿ ಘಟಕದ ಅಧ್ಯಕ್ಷ ನಲ್ಲೂರು ಸೋಮೇಶ್ವರ್, ಕಾಗಲವಾಡಿ ಚಂದ್ರು, ಶಿವಮೂರ್ತಿ, ಮಹೇಶ್ ಕುದರ್, ಜಿಲ್ಲಾ ಕಾರ್ಯದರ್ಶಿ ಪದ್ಮಪುರುಷೋತ್ತಮ್, ನಗರಸಭಾ ಸದಸ್ಯರಾದ ಕಲಾವತಿ, ಭಾಗ್ಯಮ್ಮ, ಸೇವಾ ದಳದ ಅಧ್ಯಕ್ಷ ಹೊಂಗನೂರು ಜಯರಾಜ್, ಎಎಚ್ಎನ್ ಖಾನ್, ಇಮ್ರಾನ್ ಖಾನ್, ಅಬ್ಜಾರ್, ಅಮಹದ್, ಜಾಹಿದ್, ಮುಜಾಹಿದ್, ವೀರಭದ್ರಸ್ವಾಮಿ, ಅರುಣಕುಮಾರ್, ಪ್ರಥ್ವಿ, ನಾಗು ಮೋಹನ್, ಕಾಡಹಳ್ಳಿ ರೂಪೇಶ್, ಸ್ವಾಮಿ, ರವಿಕುಮಾರ್, ಮೊದಲಾದವರು ಇದ್ದರು.