ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆ

ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿü ಜವಾಹರಲಾಲ್ ನೆಹರು ಅವರ ಜನ್ಮದಿನಾಚರಣೆಯನ್ನು ಆಚರಿಸಲಾಯಿತು.

ಶಾಸಕ ಸಿ.ಪುಟ್ಟರಂಗಶೆಟ್ಟಿ ಅವರು ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನಂತರ ಮಾತನಾಡಿ, ಜವಾಹರಲಾಲ್ ನೆಹರು ಅವರು ಭಾರತದ ಪ್ರಥಮ ಪ್ರಧಾನಿಯಾಗಿ ಸುಧೀರ್ಘವಾಗಿ ಉತ್ತಮ ಆಡಳಿತವನ್ನು ನೀಡಿದ್ದಾರೆ ಎಂದರು.

ದೇಶವನ್ನು ಮುನ್ನಡೆಸುವ ನಿಟ್ಟಿನಲ್ಲಿ ಹಲವಾರು ಕೂಡುಗೆಯನ್ನು ನೀಡಿ ದೇಶದ ರಕ್ಷಣೆಗೆ ಹೆಚ್ಚು ಒತ್ತು ನೀಡಿದ್ದರು. ಪಂಚ ವಾರ್ಷಿಕ ಯೋಜನೆಯನ್ನು ಜಾರಿಗೆ ತಂದು ದೇಶದ ಅಭಿವೃದ್ಧಿಗೆ ಶ್ರಮಿಸಿದರು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ,ಮರಿಸ್ವಾಮಿ ಮಾತನಾಡಿ, ಜವಾಹರಲಾಲ್ ನೆಹರು ಅವರ ಉನ್ನತ ಶಿಕ್ಷಣಕ್ಕಾಗಿ ಹೆಚ್ಚು ಮಹತ್ವ ನೀಡಿದರು. ಸಮಾಜಿಕ ಶೈಕ್ಷಣಿಕ ಆರ್ಥಿಕವಾಗಿ ನೆಲೆ ಕಲ್ಪಿಸಲು ಬದ್ರ ಬುನಾದಿ ಹಾಕಿದ ಕೀರ್ತಿ ಅವರಿಗೆ ಸಲ್ಲುತ್ತದೆ ಇಂತಹ ಮಹಾನ್ ವ್ಯಕ್ತಿಗಳ ಜೀವನ ಆದರ್ಶಗಳನ್ನು ಪಾಲಿಸಿಕೊಂಡು ಹೋಗಬೇಕು ಎಂದು ತಿಳಿಸಿದರು.

ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್ ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಕಾರ್ಯದರ್ಶಿ ವಕೀಲ ಅರುಣ್‍ಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವ, ಆರ್,ಮಹದೇವ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎ,ಎಸ್,ಗುರುಸ್ವಾಮಿ, ಮಹಮದ್‍ಅಸ್ಗರ್, ಜಿ,ಪಂ ಮಾಜಿ ಸದಸ್ಯರಾದ ಅರಕಲವಾಡಿ ಸೋಮನಾಯಕ, ರಮೇಶ್, ಮಾಜಿ, ತಾ.ಪಂ. ಸದಸ್ಯ ಹೆಚ್.ಎಂ.ಮಹದೇವಶೆಟ್ಟಿ, ಕಾಗಲವಾಡಿಚಂದ್ರು, ನಸ್ರುಲ್ಲಾಖಾನ್, ಅಯಿಭ್‍ಖಾನ್, ಅಬ್ಬಾಸ್, ಮರಿಯಾಲದಹುಂಡಿ ಕುಮಾರ್, ಸೇವಾದಳದ ಜಿಲ್ಲಾಧ್ಯಕ್ಷ ಜಯರಾಜ್, ಎಂ.ಸಿ.ನಾಗರಾಜು, ಸೇವಾದಳದ ಉಪಾಧ್ಯಕ್ಷ್ಷ ಪಾಟೇಲ್ ಮಹದೇವಸ್ವಾಮಿ, ಎಪಿಎಂಸಿ ಸದಸ್ಯ ಸೋಮೆಶ್, ಬಿಸಲವಾಡಿ ರವಿ, ಪರಿಶಿಷ್ಟಜಾತಿ ವಿಭಾಗದ ಅಧ್ಯಕ್ಷ ಸೋಮಣ್ಣ, ನಾಗಯ್ಯ, ಮಾಜಿ ನಗರ ಸಭಾ ಸದಸ್ಯ ಮಹದೇವಯ್ಯ, ಮೂರ್ತಿ, ಮಲ್ಲಿಕಾರ್ಜುನಲಿಂಗನಪುರ, ರಾಜಶೇಖರ್, ಗಣೇಶ್, ಸ್ವಾಮಿ, ಕುಬೇಶ್ವರ ಸೇರಿದಂತೆ ಪಕ್ಷದ ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *