ಚಾಮರಾಜನಗರ: ಚಾಮರಾಜನಗರ ಜಿಲ್ಲಾ ನೆಟ್ ಬಾಲ್ ಅಸೋಸಿಯೇಷನ್ ತಾಲ್ಲೂಕಿನ ಸಂತೇಮರಹಳ್ಳಿಯಲ್ಲಿ ಅಸ್ತಿತ್ವಕ್ಕೆ ಬಂದಿದೆ.
ಸAಘದ ನೂತನ ಗೌರವ ಅಧ್ಯಕ್ಷರಾಗಿ ನರ್ಗಿಸ್ ಬಾನು, ಅಧ್ಯಕ್ಷರಾಗಿ ಹಿರಿಯ ಕ್ರೀಡಾಪಟು ವಿ. ಶ್ರೀನಿವಾಸ್ಪ್ರಸಾದ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಮಹದೇವಪ್ರಸಾದ್. ಬಿ. ರವರು ಆಯ್ಕೆಯಾಗಿದ್ದಾರೆ.

ಈ ವೇಳೆಯಲ್ಲಿ ಮಾತನಾಡಿದ ಗೌರವಾಧ್ಯಕ್ಷರಾದ ನರ್ಗಿಸ್ ಬಾನು ಅವರು ಜಿಲ್ಲೆಯಲ್ಲಿ ಅನೇಕ ಪ್ರತಿಭಾನ್ವಿತ ನೆಟ್ಬಾಲ್ ಕ್ರೀಡಾಪಟುಗಳಿದ್ದು, ಅವರನ್ನು ಗುರುತಿಸಿ ಸಂಘಟನೆ ಮಾಡಿ ಅವರನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ಸಂಘವನ್ನು ಅಸ್ತಿತ್ವಕ್ಕೆ ತರಲಾಗಿದೆ.
ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಹಾಗೂ ರಾಜ್ಯ ಮಟ್ಟದಲ್ಲಿ ಕ್ರೀಡಾಕೂಟಗಳನ್ನು ಆಯೋಜಿಸುವುದು, ಯುವಕರನ್ನು ಮತ್ತು ಯುವತಿಯರನ್ನು ಸಮಾಜ ಕಲ್ಯಾಣ ಕಾರ್ಯಕ್ರಮಗಳಲ್ಲಿ ನೆರವಾಗಲು ನಮ್ಮ ಸಂಘದ ಮೂಲಕ ನಿಯೋಜಿಸಲಾಗುವುದು ಎಂದು ಅವರು ತಿಳಿಸಿದರು.
ಅಧ್ಯಕ್ಷ ವಿ. ಶ್ರೀನಿವಾಸ್ಪ್ರಸಾದ್ ಮಾತನಾಡಿ, ಕ್ರೀಡಾಪಟುಗಳಲ್ಲಿ ಶಿಸ್ತು ಮತ್ತು ಸಮಗ್ರತೆಯನ್ನು ಮೂಡಿಸುವುದು ನಮ್ಮ ಸಂಘದ ಮುಖ್ಯ ಉದ್ದೇಶವಾಗಿದ್ದು, ಕ್ರೀಡಾಪಟುಗಳು ಇದನ್ನು ಸದುಪಯೋಗಪಡಿಸಬೇಕೆಂದು ಅವರು ಕರೆ ನೀಡಿದರು.
ಇದೇ ಸಂದರ್ಭದಲ್ಲಿ ಸಂಘದ ನೂತನ ಉಪಾಧ್ಯಕ್ಷರಾಗಿ ವಿಶ್ವನಾಥ್. ಎ.ಸಿ. ರಾಜೇಂದ್ರ. ಸಿ., ಸಹ ಕಾರ್ಯದರ್ಶಿಯಾಗಿ ಸುರೇಶ್ಕುಮಾರ್.ಜಿ., ಖಜಾಂಚಿಯಾಗಿ ಮಹದೇವಸ್ವಾಮಿ. ಎಂ.ಸಿ., ಸಂಘಟನಾ ಕಾರ್ಯದರ್ಶಿಯಾಗಿ ಸಿ.ಎಂ. ಮಧುಕುಮಾರ್ ಆಯ್ಕೆಯಾದರು.