ಚಾಮರಾಜನಗರ: ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುವುದನ್ನು ವಿರೋಧಿಸಿ ವಿವಿಧ ಸಂಘಟನೆಗಳು ಕರೆ ನೀಡಿದ್ದ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್ ಅವರು ಇಂದು ಜಿಲ್ಲೆಯ ವಿವಿಧ ಭಾಗಗಳಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದರು.

ಪುಣಜನೂರು ಪೆÇಲೀಸ್ ಹಾಗೂ ಆರ್.ಟಿ.ಒ ಚೆಕ್ಪೆÇೀಸ್ಟ್ ಗಡಿ ಭಾಗಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಯವರು ಪರಿಸ್ಥಿತಿಯ ಪರಿಶೀಲನೆ ನಡೆಸಿದರು. ಬಿಸಲವಾಡಿ ಚೆಕ್ಪೆÇೀಸ್ಟ್, ಮೂಡಲ ಹೊಸಹಳ್ಳಿ, ಯತ್ತಿಕಟ್ಟೆ ಬೆಟ್ಟಕ್ಕೆ ಭೇಟಿ ನೀಡಿದರು.
ಗಡಿಭಾಗದಲ್ಲಿ ವಾಹನಗಳ ಸುರಕ್ಷಿತ ಸಂಚಾರದ ಪರಿಸ್ಥಿತಿಗಳನ್ನು ಅವಲೋಕಿಸಿ, ಅಧಿಕಾರಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು.
ಆರ್.ಟಿ.ಒ., ಪೆÇಲೀಸ್, ಕಂದಾಯ ಇಲಾಖೆ ಅಧಿಕಾರಿಗಳಿಗೆ ಜಿಲ್ಲೆಗೆ ಹೊಂದಿಕೊಂಡಿರುವ ರಾಜ್ಯ ಮತ್ತು ತಮಿಳುನಾಡು ಗಡಿ ಭಾಗದಲ್ಲಿ ವಾಹನಗಳ ಸುರಕ್ಷಿತ ಸಂಚಾರದ ಬಗ್ಗೆ ಖಾತರಿಪಡಿಸುವಂತೆ ಹಾಗೂ ಅಗತ್ಯ ನಿರ್ದೇಶನಗಳನ್ನು ನೀಡಿದರು.