ಚಾಮರಾಜನಗರ: ಕನ್ನಡ ರಾಜ್ಯೋತ್ಸವದ ಅಂಗವಾಗಿ ನಗರದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಭುವನೇಶ್ವರಿ ದೇವಿಗೆ ಪೂಜೆ ಸಲ್ಲಿಸಿ,ಪುಷ್ಪ ನಮನ ಸಲ್ಲಿಸಲಾಯಿತು.

ನಗರದ ಕುಲುಮೆ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯ ಅವರಣದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪಿ. ವೃಷಬೇಂದ್ರಪ್ಪ ಭುವನೇಶ್ವರಿ ತಾಯಿಗೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿದ ಅವರು, ಕನ್ನಡ ನಾಡು ನುಡಿ ವಿಚಾರದಲ್ಲಿ ನಾವೆಲ್ಲರು ಒಂದಾಗಬೇಕಾಗಿದೆ. ಕನ್ನಡ ನಾಡು ಕಟ್ಟಲು ಅನೇಕ ಮಹನೀಯ ತ್ಯಾಗವನ್ನು ಸ್ಮರಿಸಿಕೊಳ್ಳುವ ಜೊತೆಗೆ ಕರ್ನಾಟಕದಲ್ಲಿ ಕನ್ನಡ ಭಾಷೆಗೆ ಪ್ರಥಮ ಪ್ರಾಶಸ್ತ್ಯ ಎಂಬುವುದನ್ನು ನಾವೆಲ್ಲರು ಅರಿತುಕೊಂಡು ಕನ್ನಡ ಭಾಷೆಯ ಬೆಳವಣಿಗೆಗೆ ಎಲ್ಲರು ಹೆಚ್ಚಿನ ಅದ್ಯತೆ ನೀಡೋಣ ಎಂದರು.
ಕಾಡಾ ಮಾಜಿ ಅಧ್ಯಕ್ಷ ನಿಜಗುಣರಾಜು ಮಾತನಾಡಿ, ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಒಗ್ಗೂಡಿಸಿ, ಏಕೀಕರಣಗೊಳಿಸಿ ನೂತನವಾಗಿ ಕರ್ನಾಟಕ ಎಂದು ನಾಮಕರಣ ಮಾಡಿದ ಸುದಿನವಾಗಿದೆ. ನಾವೆಲ್ಲರು ಕನ್ನಡ ನಾಡು, ನುಡಿ ಜಲ ವಿಚಾರದಲ್ಲಿ ಒಗ್ಗಟ್ಟು ಪ್ರದರ್ಶನ ಮಾಡುವ ಜೊತೆಗೆ ಕನ್ನಡದ ಬೆಳವಣಿಗೆಗೆ ಎಲ್ಲರು ಶ್ರಮಿಸೋಣ ಎಂದರು.
ಕಾರ್ಯಕ್ರಮದಲ್ಲಿ ಮುಖಂಡರಾದ ನಿಜಧ್ವನಿ ವೆಂಕಟೇಶ್, ಎಸ್. ಬಾಲಸುಬ್ರಮಣ್ಯ, ಎಸ್ಟಿ ಮೋರ್ಚಾ ಅಧ್ಯಕ್ಷ ಜಯಸುಂದರ್, ಜಿಲ್ಲಾ ಕಾರ್ಯದರ್ಶಿ ಸರಸ್ವತಿ, ಬಸವಣ್ಣ, ರಾಮಸಮುದ್ರ ಮಹದೇವಸ್ವಾಮಿ, ಶಿವಣ್ಣ, ದಡದಹಳ್ಳಿ ಶಂಖರ್. ಲೋಕೇಶ್, ದಾಕ್ಷಾಯಿಣಿ, ವನಾಜಾಕ್ಷಿ, ಜಯಶ್ರೀ, ಮೊದಲಾಧವರು ಇದ್ದರು.