ಚಾಮರಾಜನಗರ: ಜಿಲ್ಲಾ ಸಹಕಾರ ಒಕ್ಕೂಟಕ್ಕೆ ಸತತ ನಾಲ್ಕನೇ ಬಾರಿಗೆ ಜಿಲ್ಲಾ ಸಹಕಾರ ಒಕ್ಕೂಟದ ಹಾಲಿ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಮಲೆಯೂರು ನಾಗರಾಜು ಇತರೇ ಸಹಕಾರ ಸಂಘಗಳ ಕ್ಷೇತ್ರದಿಂದ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಸಹಕಾರ ಒಕ್ಕೂಟದ ಕಚೇರಿಯಲ್ಲಿ ಇಂದು ನಾಮಪತ್ರಗಳ ಪರಿಷ್ಕರಣೆ ನಡೆಯಿತು. .ಜಿಲ್ಲಾ ಕೈಗಾರಿಕಾ ಕೈಗಾರಿಕ ಸಹಕಾರ ಬ್ಯಾಂಕ್ ಅಧ್ಯಕ್ಷರಾಗಿರುವ ನಾಗರಾಜು ಕಳೆದ ಮೂರು ಅವಧಿಯಲ್ಲಿ ಇತರೇ ಸಹಕಾರ ಕ್ಷೇತ್ರದಿಂದ ಒಕ್ಕೂಟದ ನಿರ್ದೇಶಕರಾಗಿ ಆಯ್ಕೆಯಾಗುತ್ತಿದ್ದರು. ಈ ಬಾರಿಯು ಸಹ ಅವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರಿಂದ ಚುನಾವಣಾಧಿಕಾರಿಯಾಗಿರುವ ಸಹಕಾರ ಸಂಘಗಳ ಉಪ ನಿಬಂಧಕ ದಯನಂದ ಅವಿರೋಧ ಆಯ್ಕೆಯನ್ನು ದೃಢಪಡಿಸಿದ್ದಾರೆ.
ಜಿಲ್ಲಾ ಸಹಕಾರ ಒಕ್ಕೂಟಕ್ಕೆ ಸತತ ನಾಲ್ಕ ಬಾರಿಗೂ ಅವಿರೋಧ ಆಯ್ಕೆಯಾಗಿರುವುದಕ್ಕೆ ಕೈಗಾರಿಕಾ ಸಹಕಾರ ಬ್ಯಾಂಕ್ ಹಾಗೂ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾದ ಮಲೆಯೂರು ನಾಗರಾಜು ಅವರನ್ನು ಜಿ.ಪಂ. ಮಾಜಿ ಸದಸ್ಯರಾದ ಕೆರೆಹಳ್ಳಿ ನವೀನ್, ಗುರುಸಿದ್ದೇಗೌಢ, ತಾ.ಪಂ ಮಾಜಿ ಸದಸ್ಯ ಮುಕ್ಕಡಹಳ್ಳಿ ರವಿಕುಮಾರ್, ಗ್ರಾ.ಪಂ. ಮಾಜಿ ಸದಸ್ಯ ಆನಂದ್, ಸಾಗಡೆ ಸುರೇಶ್, ಶಿವಕುಮಾರ್ ಕೆಂಗಾಕಿ, ಗ್ರಾ.ಪಂ. ಮಾಜಿ ಅಧ್ಯಕ್ಷ ಕುಮಚಹಳ್ಳಿ ಸ್ವಾಮಿ, ಮುಕ್ಕಡಹಳ್ಳಿ ಗುರುಸ್ವಾಮಿ ಇತರರು ಅಭಿನಂದಿಸಿದ್ದಾರೆ.