ಚಾಮರಾಜನಗರ: ತಾಲೂಕಿನ ಬದನಗುಪ್ಪೆ, ಕೆಲ್ಲಂಬಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಆದಿತ್ಯ ಬಿರ್ಲಾ (ಗ್ರಾಸಿಮ್) ಪ್ರೈ.ಲಿ ಉದ್ಯೋಗ ನೇಮಕಾತಿಗಾಗಿ ನೇರ ಸಂದರ್ಶನವನ್ನು ಜುಲೈ ೨೪ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಜಿಲ್ಲಾಡಳಿತ ಭವನದ ಆವರಣದಲ್ಲಿರುವ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಭ್ಯರ್ಥಿಗಳು ಡಿಪ್ಲೋಮಾ ಇನ್ ಮೆಕ್ಯಾನಿಕಲ್, ಕೆಮಿಕಲ್, ಪೆಟ್ರೊಕೆಮಿಕಲ್ ವಿದ್ಯಾರ್ಹತೆ ಹೊಂದಿದ್ದು, ೨ ರಿಂದ ೪ ವರ್ಷಗಳ ಅನುಭವ ಹೊಂದಿರಬೇಕು. ೨೨ ರಿಂದ ೪೦ರ ವಯೋಮಿತಿಯಲ್ಲಿಬೇಕು. ಆಸಕ್ತ ಅಭ್ಯರ್ಥಿಗಳು ಸ್ವ ವಿವರ ಮತ್ತು ಅಂಕಪಟ್ಟಿಗಳ ಮೂಲ ಹಾಗೂ ಜೆರಾಕ್ಸ್ ಪ್ರತಿಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ನಗರದ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಜಿಲ್ಲಾ ಉದ್ಯೋಗಾಧಿಕಾರಿ (ಮೊ.ಸಂ ೮೮೮೪೮೬೫೨೯೯, ದೂ.ಸಂ ೦೮೨೨೬-೨೨೪೪೩೦) ಸಂಪರ್ಕಿಸುವಂತೆ ಉದ್ಯೋಗಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.