ಪದವಿ ಶಿಕ್ಷಣದ ಜೊತೆಗೆ ಕೌಶಲ್ಯಾಭಿವೃದ್ದಿ ತರಬೇತಿ ಹೊಂದಿ ಉದ್ಯೋಗ ಪಡೆದುಕೊಳ್ಳಿ : ಪಿ. ಮಾದೇಶ್

ಚಾಮರಾಜನಗರ: ವಿದ್ಯಾರ್ಥಿಗಳು ಪದವಿ ಜೊತೆಗೆ ಕೌಶಲ್ಯ ತರಬೇತಿಯನ್ನು ಪಡೆದು ಉದ್ಯೋಗದತ್ತ ಹೋಗಬೇಕು. ಇಲ್ಲವೇ ಸ್ನಾತಕೋತ್ತರ ಪದವಿ ಹಾಗೂ ಪಿಎಚ್‍ಡಿ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಚಾಮರಾಜನಗರ ವಿಶ್ವವಿದ್ಯಾಲಯ ಕುಲಸಚಿವ ಪ್ರೊ. ಪಿ.ಮಾದೇಶ್ ತಿಳಿಸಿದರು.

ನಗರದ ಕರಿನಂಜನಪುರ ರಸ್ತೆಯಲ್ಲಿರುವ ಸಿದ್ದಾರ್ಥ ಪ್ರಥಮ ದರ್ಜೆ ಕಾಲೇಜಿನ ಕಲಾ ಮತ್ತು ವಾಣಿಜ್ಯ ವಿಭಾಗದ ಹಿರಿಯ ವಿದ್ಯಾರ್ಥಿಗಳಿಗೆ ಸ್ವಾಗತ ಹಾಗೂ 2022 -23ನೇ ಸಾಲಿನ ಪದವಿ ಪಡೆದ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ ಉದ್ಗಾಟಿಸಿ ಮಾತನಾಡಿದ ಅವರು, ಪದವಿ ಪಡೆದುಕೊಳ್ಳುವುದು ಮುಖ್ಯವಲ್ಲ. ಭಾಷೆ ಪ್ರೌಢಿಮೆ ಇರಬೇಕು. ಕೌಶಲ್ಯ ತರಬೇತಿ ಇದ್ದರೆ ಎಲ್ಲಿಯಾದರು ಉದ್ಯೊಗವನ್ನು ಪಡೆದುಕೊಳ್ಳಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ವಿಶ್ವವಿದ್ಯಾಲಯ ವತಿಯಿಂದ ಪದವಿ ಪಡೆದ ವಿದ್ಯಾರ್ಥಿಗಳಿಗೆ ವಿವಿಧ ತರಬೇತಿಯನ್ನು ಕೊಡಿಸಲು ಬದ್ದರಾಗಿರುವುದಾಗಿ ತಿಳಿಸಿದರು.

ಪದವಿ ಶಿಕ್ಷಣ ಪಡೆಯುವ ಜೊತೆಗೆ ಮಾನವೀಯ ಮೌಲ್ಯಗಳನ್ನು ಪಡೆದುಕೊಳ್ಳಬೇಕು. ಸಿದ್ದಾರ್ಥ ವಿದ್ಯಾ ಸಂಸ್ಥೆಯು ಕಳೆದ 22 ವರ್ಷಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ವನ್ನು ನೀಡುತ್ತಾ ಬಂದಿದೆ. ಬಡವರು ಹಾಗೂ ಮಧ್ಯಮ ವರ್ಗದ ವಿದ್ಯಾರ್ಥಿಗಳೇ ಹೆಚ್ಚು ಇಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇಂಥ ಸಂಸ್ಥೆಗಳು ಬೆಳೆದಷ್ಟು ಅನುಕೂಲವಾಗುತ್ತದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳಾದ ನಿಮಗೆ ಎಲ್ಲಾ ರೀತಿಯ ಸಲಹೆ, ಸಹಕಾರ, ಮಾರ್ಗದರ್ಶನ ನೀಡುವುದಾಗಿ ಮಾದೇಶ್ ತಿಳಿಸಿದರು.

ಮಾಜಿ ಶಾಸಕ ಜಿ.ಎನ್. ನಂಜುಂಡಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿ, ಪದವಿ ಶಿಕ್ಷಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿ, ಭವಿಷ್ಯವನ್ನು ರೂಪಿಸಿಕೊಳ್ಳಲು ಮುಂದಾಗಿರುವ ತಾವೆಲ್ಲರು ಇನ್ನು ಹೆಚ್ಚಿನ ವ್ಯಾಸಂಗ ಮಾಡಿ, ಶಿಕ್ಷಣವನ್ನು ಪಡೆದು ಉತ್ತಮ ಪ್ರಜೆಗಳಾಗಬೇಕು. ತಂದೆ, ತಾಯಿ ಅಸೆಯನ್ನು ಪೊರೈಸುವ ಜೊತೆಗೆ ಸತ್ಪ್ರಜೆಗಳಾಗಬೇಕು ಎಂದರು.

ಕುಲಸಚಿವರಾಗಿರುವ ಪ್ರೊ. ಪಿ. ಮಾದೇಶ್ ಅವರು ನಮ್ಮ ಕೊಳ್ಳೇಗಾಲ ತಾಲೂಕಿನ ಮುಳ್ಳೂರು ಗ್ರಾಮದವರು. ಬಹಳ ಕಷ್ಟಪಟ್ಟು ವ್ಯಾಸಂಗ ಮಾಡಿದ, ರ್ಯಾಂಕ್ ಗಳಿಸಿ, ವಿವಿಧ ಹುದ್ದೆಗಳನ್ನು ಹೊಂದಿ ಈಗ ಚಾ.ನಗರ ವಿಶ್ವವಿದ್ಯಾಲಯದಲ್ಲಿ ಮೌಲ್ಯ ಮಾಪನ ವಿಭಾಗದಲ್ಲಿ ಕುಲಸಚಿವರಾಗಿದ್ದಾರೆ. ಬಹಳ ಜ್ಞಾನಿಗಳು ಅವರ ಭಾಷಣದಲ್ಲಿ ತಮ್ಮ ವಿದ್ಯಾರ್ಥಿ ಜೀವನ ಕಷ್ಟಗಳನ್ನು ನಿಮ್ಮೋಡನೆ ಹಂಚಿಕೊಂಡರು. ಕಾರಣ ನೀವು ಸಹ ಅವರಂತೆ ಕಷ್ಟು ಪಟ್ಟ ವ್ಯಾಸಂಗ ಮಾಡಿ, ಸಮಾಜದಲ್ಲಿ ಸಾಧನೆ ಮಾಡಬೇಕೆಂಬ ಹಂಬಲ ಅವರಾದ್ದಾಗಿದೆ. ಅವರ ಸೇವೆಯನ್ನು ತಾವೆಲ್ಲರು ಬಳಸಿಕೊಂಡು ಉನ್ನತ ವ್ಯಾಸಂಗ ಮಾಡಬೇಕೆಂದು ಕಿವಿಮಾತು ಹೇಳಿದರು.

ಕಾರ್ಯಕ್ರಮದಲ್ಲಿ ಭಾರತೀಯ ಭೌದ್ದ ಮಹಸಭಾ ಉಪಾದ್ಯಕ್ಷೆ ನಾಗಶಿಲ್ಪ, ಪದವಿ ಕಾಲೇಜಿನ ಪ್ರಾಂಶುಪಾಲ ಎನ್. ಮಹದೇವಸ್ವಾಮಿ, ಪಿಯು ಕಾಲೇಜಿನ ಪ್ರಾಂಶುಪಾಲ ಸಿ. ರಂಗಸ್ವಮಿ, ಹಿಫೋ ಕ್ಯಾಂಪಸ್ ಶಾಲೆಯ ಮುಖ್ಯ ಶಿಕ್ಷಕಿ ಶೃತಿ, ಅಧ್ಯಾಪಕರಾದ ಲತಾ ಹಾಗು ವಿದ್ಯಾಥಿಗಳು ಉಪಸ್ಥಿತಿರಿದ್ದರು.

Leave a Reply

Your email address will not be published. Required fields are marked *