ಚಾಮರಾಜನಗರ: ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಪಿಂಚಣಿ ಜಮೆ ಆಗುವ ಬ್ಯಾಂಕ್ ಅಥವಾ ಅಂಚೆ ಕಚೇರಿಯ ಖಾತೆಗೆ ಅಕ್ಟೋಬರ್ 31ರೊಳಗೆ ಇ-ಕೆವೈಸಿ ಮತ್ತು ಎನ್ಪಿಸಿಐ ಮ್ಯಾಪಿಂಗ್ ಮಾಡಿಸುವಂತೆ ಜಿಲ್ಲಾಧಿಕಾರಿಯವರು ತಿಳಿಸಿದ್ದಾರೆ.
ವೃದ್ದಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ ವೇತನ, ಅಂಗವಿಕಲರ ವೇತನ, ಮನಸ್ವಿನಿ ಮತ್ತು ಮೈತ್ರಿ ಹಾಗೂ ಇತರೆ ಮಾಸಿಕ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೋರೇಷನ್ ಆಫ್ ಇಂಡಿಯಾ ಮೂಲಕ ಆಧಾರ್ ಆಧಾರಿತ ಪಿಂಚಣಿ ಪಾವತಿಸಲು ಸರ್ಕಾರ ತೀರ್ಮಾನಿಸಿದೆ.
ಈ ಹಿನ್ನೆಲೆಯಲ್ಲಿ ಫಲಾನುಭವಿಗಳು ಕಡ್ಡಾಯವಾಗಿ ಅಕ್ಟೋಬರ್ ೩೧ ರೊಳಗೆ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಅಥವಾ ಅಂಚೆ ಕಚೇರಿಯ ಖಾತೆಗೆ ತಕ್ಷಣವೇ ಇ-ಕೆವೈಸಿ ಮತ್ತು ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಬೇಕು. ತಪ್ಪಿದ್ದಲ್ಲಿ ಪಿಂಚಣಿ ಸೇವೆಯು ರದ್ದಾಗಲಿದೆ ಎಂದು ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.