ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ

ಚಾಮರಾಜನಗರ: ಮೀನುಗಾರಿಕೆ ಇಲಾಖೆ ವತಿಯಿಂದ ೨೦೨೩-೨೪ನೇ ಸಾಲಿಗೆ ಕೇಂದ್ರ ಪುರಷ್ಕೃತ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ವಿವಿಧ ಉಪ ಯೋಜನೆಗಳಿಗೆ ಸಹಾಯಧನ ನೀಡಲು ಅರ್ಹ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಜಿಲ್ಲೆಯಲ್ಲಿ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಒಳನಾಡು ಮೀನುಗಾರಿಕೆಗೆ ಸಂಬಂಧಿಸಿದ ಉಪ ಯೋಜನೆಗಳಾದ ಹೊಸ ಮೀನುಕೃಷಿ ಕೊಳಗಳ ನಿರ್ಮಾಣ, ಸಿಹಿ ನೀರಿನ ಜಲಕೃಷಿಗೆ ಹೂಡಿಕೆ ವೆಚ್ಚ, ಸಿಹಿನೀರಿನ ಪ್ರದೇಶಗಳಿಗೆ ಬಯೋಫ್ಲಾಕ್ಸ್ ಕೊಳಗಳ ನಿರ್ಮಾಣ, ಅಕ್ವೇರಿಯಂ, ಅಲಂಕಾರಿಕ ಮೀನುಗಳ ಕಿಯೋಸ್ಕ್ ಸೇರಿದಂತೆ ಮೀನು ಕಿಯೋಸ್ಕ್‌ಗಳ ನಿರ್ಮಾಣ, ಸಾಂಪ್ರಾದಾಯಿಕ ಮೀನುಗಾರರಿಗೆ ದೋಣಿಗಳು (ಬದಲಿ) ಮತ್ತು ಬಲೆಗಳನ್ನು ಒದಗಿಸುವ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ.

ಸಾಮಾನ್ಯ ವರ್ಗದ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.೪೦ ರಷ್ಟು ಸಹಾಯಧನ ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಮಹಿಳಾ ಫಲಾನುಭವಿಗಳಿಗೆ ಘಟಕ ವೆಚ್ಚದ ಶೇ.೬೦ ರಷ್ಟು ಸಹಾಯಧನವನ್ನು ಇಲಾಖೆ ವತಿಯಿಂದ ನೀಡಲಾಗುವುದು.

ಆಸಕ್ತ ಒಳನಾಡು ಮೀನುಗಾರರು ಸೂಕ್ತ ದಾಖಲೆಗಳೊಂದಿಗೆ ಸಂಬಂಧಪಟ್ಟ ತಾಲ್ಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರ ಕಚೇರಿ ಸಂಪರ್ಕಿಸಿ ಆಗಸ್ಟ್ ೨೧ರೊಳಗಾಗಿ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಮೀನುಗಾರಿಕೆ ಉಪ ನಿರ್ದೇಶಕರು (ಮೊ.ಸಂ. ೯೫೩೫೩೭೩೭೯೩), ಚಾಮರಾಜನಗರ ಹಾಗೂ ಕೊಳ್ಳೇಗಾಲ ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು (ಮೊ.ಸಂ. ೮೧೨೩೭೪೭೩೩೪), ಗುಂಡ್ಲುಪೇಟೆ ಹಾಗೂ ಯಳಂದೂರು ಮೀನುಗಾರಿಕೆ ಸಹಾಯಕ ನಿರ್ದೇಶಕರು (ಮೊ.ಸಂ. ೯೭೪೨೪೪೧೮೯೮), ಸಂಪರ್ಕಿಸುವಂತೆ ಮೀನುಗಾರಿಕೆ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *