ಬದನಗುಪ್ಪೆಯಲ್ಲಿ ಸ್ವಚ್ಚತಾ ಹೀ ಸೇವಾ ಆಂದೋಲನದಡಿ ಶ್ರಮದಾನ ಕಾರ್ಯಕ್ಕೆ ಜಿ.ಪಂ. ಸಿ.ಇ.ಒ. ಚಾಲನೆ

ಚಾಮರಾಜನಗರ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಸ್ವಚ್ಚತಾ ಹೀ ಸೇವಾ ಜನಾಂದೋಲನ ಕಾರ್ಯಕ್ರಮದಡಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲಾ ಮಟ್ಟದ ಬೃಹತ್ ಸ್ವಚ್ಚತಾ ಶ್ರಮದಾನ ಕಾರ್ಯಕ್ಕೆ ಬದನಗುಪ್ಪೆ ಗ್ರಾಮದಲ್ಲಿಂದು ಚಾಲನೆ ನೀಡಿದರು.

ಚಾಮರಾಜನಗರ ತಾಲ್ಲೂಕಿನ ಬದನಗುಪ್ಪೆ ಪಂಚಾಯಿತಿ ವ್ಯಾಪ್ತಿಯ ಪಣ್ಯದಹುಂಡಿ(ಬದನಗುಪ್ಪೆ)ಯ ರೈಲ್ವೆ ನಿಲ್ದಾಣದಲ್ಲಿ ಜಿಲ್ಲಾ ಪಂಚಾಯತ್, ಬದನಗುಪ್ಪೆ ಹಾಗೂ ಹೆಗ್ಗೋಠಾರ ಗ್ರಾಮ ಪಂಚಾಯಿತಿ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ಸ್ವಚ್ಚತಾ ಹೀ ಸೇವಾ ಜನಾಂದೋಲನ ಸ್ವಚ್ಚತಾ ಕಾರ್ಯಕ್ರಮದಲ್ಲಿ ನಿಲ್ದಾಣದ ಅವರಣದಲ್ಲಿ ಪ್ಲಾಸ್ಟಿಕ್ ಮತ್ತು ಗಿಡಗಂಟೆಗಳನ್ನು ತೆರವುಗೊಳಿಸುವ ಮೂಲಕ ಸ್ವಚ್ಚಗೊಳಿಸಲಾಯಿತು.

ಜಿಲ್ಲೆಯಲ್ಲಿ ಮಹಾತ್ಮ ಗಾಂಧಿ ಜನ್ಮದಿನದ ಸ್ಮರಣಾರ್ಥವಾಗಿ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ವಿವಿಧ ಸ್ವಚ್ಚತಾ ನೈರ್ಮಲ್ಯ ಸಂಬಂಧಿತ ಚಟುವಟಿಕೆಗಳನ್ನು ಹಮ್ಮಿಕೊಳ್ಳುವ ಮೂಲಕ ಗ್ರಾಮೀಣ ಜನರಲ್ಲಿ ಸುಸ್ಥಿರ ನೈರ್ಮಲ್ಯ ಅಭ್ಯಾಸಗಳ ಕುರಿತು ಹೆಚ್ಚಿನ ಅರಿವು ಮೂಡಿಸÀಲಾಗುತ್ತಿದೆ. ಈ ನಿಟ್ಟಿನಲ್ಲಿ ಕಳೆದ 15 ದಿನಗಳಿಂದ ಪ್ರತಿದಿನ ಒಂದೊಂದು ಚಟುವಟಿಕೆಯಂತೆ ಶಾಲಾ, ಕಾಲೇಜು ವಿಧ್ಯಾರ್ಥಿಗಳು ಸ್ಕೌಟ್ಸ್ ಮತ್ತು ಗೈಡ್ಸ್ ಸ್ವಯಂ ಸೇವಕರು ಸ್ವಯಂ ಸೇವಾ ಸಂಸ್ಧೆಗಳು, ಆಶಾ ಅಂಗವಾಡಿ ಕಾರ್ಯಕರ್ತೆಯರು, ಸ್ವಚ್ಚತಾ ಅನುಷ್ಠಾನಗೊಳಿಸುವ ವಿವಿಧ ಇಲಾಖೆಗಳು, ಮಹಿಳಾ ಸ್ವ ಸಹಾಯ ಗುಂಪುಗಳು ಗ್ರಾಮ, ತಾಲ್ಲೂಕು ಹಾಗೂ ಜಿಲ್ಲಾ ಪಂಚಾಯಿತಿಗಳ ಸಹಯೋಗದೊಂದಿಗೆ ಕಾರ್ಯಕ್ರಮವನ್ನು ಅನುμÁ್ಠನ ಮಾಡಲಾಗುತ್ತಿದೆ.

ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಆನಂದ್ ಪ್ರಕಾಶ್ ಮೀನಾ ಅವರು ಕೇಂದ್ರ ಜಲಶಕ್ತಿ ಮಂತ್ರಾಲಯ ಹಾಗೂ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮಾರ್ಗಸೂಚಿಗಳನ್ವಯ ಜಿಲ್ಲಾದ್ಯಂತ ಬೃಹತ್ ಮಟ್ಟದ ಶ್ರಮದಾನ ಕಾರ್ಯಕ್ರಮವನ್ನು ಸಾರ್ವಜನಿಕ ಸ್ಧಳ, ರಸ್ತೆಬದಿ, ಶಾಲಾ ಆವರಣ, ಆಸ್ಪತ್ರೆ ಆವರಣ, ಸಾರ್ವಜನಿಕ ಕಟ್ಟಡಗಳು ಧಾರ್ಮಿಕ ಕ್ಷೇತ್ರಗಳು ಹಾಗೂ ಪ್ರವಾಸಿತಾಣಗಳಲ್ಲಿ ವಿನೂತನ ರೀತಿಯಲ್ಲಿ ಹಮ್ಮಿಕೊಂಡು ತ್ಯಾಜ್ಯ ಮುಕ್ತ ಭಾರತವನ್ನು ರೂಪಿಸುವಲ್ಲಿ ಯಶಸ್ವಿಯಾಗಬೇಕಿದೆ ಎಂದರು.

ಜಿಲ್ಲಾ ಪಂಚಾಯತ್ ಯೋಜನಾ ನಿರ್ದೇಶಕರಾದ ಕಿರಣ್ ಪಡ್ನೇಕರ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮ, ಸಹಾಯಕ ನಿರ್ದೇಶಕರಾದ ಪ್ರಕಾಶ್, ಸ್ವಚ್ಚ ಭಾರತ್ ಮಿಷನ್ (ಗ್ರಾ) ಜಿಲ್ಲಾ ಸಮಾಲೋಚಕ ಎಂ ಮಹದೇವು, ಪ್ರಭುಸ್ವಾಮಿ, ಜೋಸೆಫ್, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಎಂ ಕುಮಾರ್, ಮತ್ತು ಆರ್ ಅಂಬಿಕಾ, ಗ್ರಾ.ಪಂ. ಸದಸ್ಯರು, ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಮಾದಪ್ಪ, ಮಹದೇವಸ್ವಾಮಿ, ಕಾರ್ಯದರ್ಶಿ ನಾಗನಾಯಕ, ಲೋಕೇಶ್, ಆಶಾ, ಅಂಗನವಾಡಿ ಕಾರ್ಯಕರ್ತೆಯರು ರೈಲ್ವೆ ಇಲಾಖೆಯ ಕಾರ್ಮಿಕರು ಹಾಗೂ ಸಾರ್ವಜನಿಕರು ಸ್ವಚ್ಚತಾ ಶ್ರಮಧಾನ ಕಾರ್ಯಕ್ರಮ ಭಾಗವಹಿಸಿದ್ದರು.

Leave a Reply

Your email address will not be published. Required fields are marked *