ಸೆ. 23 ರಂದು ವೆಂಕಟಯ್ಯನಛತ್ರ ಸಹಕಾರಿ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ

ಚಾಮರಾಜನಗರ: ತಾಲೂಕಿನ ವೆಂಕಟಯ್ಯನಛತ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ (ವಿವಿದೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘ) ದ 2022-23 ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆ ಸೆ. 23 ರಂದು ಶನಿವಾರ ಬೆಳಿಗ್ಗೆ 11 ಗಂಟೆಗೆ ಸಂಘದ ಅವರಣದಲ್ಲಿ ಏರ್ಪಡಿಸಲಾಗಿದೆ.

ಮಹಾಸಭೆಯ ಅಧ್ಯಕ್ಷತೆಯನ್ನು ಸಂಘದ ಅಧ್ಯಕ್ಷÀ ಎಚ್. ವಿ. ಗಿರಿಮಲ್ಲು ವಹಿಸಲಿದ್ದು, ಅತಿಥಿಗಳಾಗಿ ಎಂಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎನ್. ನಾಗೇಂದ್ರಕುಮಾರ್, ಮೇಲ್ವಿಚಾರಕÀ ಎನ್. ಸಂದೀಪ್ ಭಾಗವಹಿಸಲಿದ್ದಾರೆ. ಸರ್ವ ಸದಸ್ಯರು ವಾರ್ಷಿಕ ಮಹಾಸಭೆಗೆ ತಪ್ಪದೇ ಹಾಜರಾಗಿ ಯಶಸ್ವಿಗೊಳಿಸಿಕೊಡಬೇಕೆಂದು ಸಂಘದ ಮುಖ್ಯ ಕಾರ್ಯನಿರ್ವಾಣಾಧಿಕಾರಿ ನಾಗರಾಜಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.

Leave a Reply

Your email address will not be published. Required fields are marked *