ಸೆ. 25ರೊಳಗೆ ವಿವಿಧ ಪಿಂಚಣಿಗಳಿಗೆ ಆಧಾರ್ ಜೋಡಣೆ, ಎನ್.ಪಿ.ಸಿಐ ಮ್ಯಾಪಿಂಗ್ ಮಾಡಿಸಲು ಸೂಚನೆ

ಚಾಮರಾಜನಗರ: ಚಾಮರಾಜನಗರ ತಾಲೂಕಿನಲ್ಲಿ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳು ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಮತ್ತು ಅಂಚೆ ಕಚೇರಿಯ ಉಳಿತಾಯ ಖಾತೆಗೆ ಕಡ್ಡಾಯವಾಗಿ ಎನ್.ಪಿ.ಸಿಐ ಮ್ಯಾಪಿಂಗ್ ಮಾಡಿಸುವಂತೆ ತಿಳಿಸಲಾಗಿದೆ.

ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿ ಇಂದಿರಾ ಗಾಂಧಿ ವೃದ್ದಾಪ್ಯ ವೇತನ, ವಿಧವಾ ವೇತನ, ಸಂಧ್ಯಾ ಸುರಕ್ಷಾ, ಅಂಗವಿಕಲ ವೇತನ, ಮನಸ್ವಿನಿ ಮತ್ತು ಮೈತ್ರಿ ಯೋಜನೆಯಡಿ ಪಿಂಚಣಿ ಪಡೆಯುತ್ತಿರುವ ಫಲಾನುಭವಿಗಳಿಗೆ ನೇರ ಹಣ ವರ್ಗಾವಣೆ ಭಾರತೀಯ ರಾಷ್ಟ್ರೀಯ ಪಾವತಿ ನಿಗಮ (ನ್ಯಾಷನಲ್ ಪೇಮೆಂಟ್ ಕಾರ್ಪೋರೆಷನ್ ಆಫ್ ಇಂಡಿಯಾ) ಮೂಲಕ ಆಧಾರ್ ಆಧಾರಿತ ಪಿಂಚಣಿ ಪಾವತಿ ಮಾಡಲು ಸರ್ಕಾರ ತಿರ್ಮಾನಿಸಿದೆ.

ಫಲಾನುಭವಿಗಳು ತುರ್ತಾಗಿ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಮತ್ತು ಅಂಚೆ ಕಚೇರಿಯ ಉಳಿತಾಯ ಖಾತೆಗೆ ಸೆಪ್ಟೆಂಬರ್ ೨೫ರೊಳಗಾಗಿ ಕಡ್ಡಾಯವಾಗಿ ಎನ್.ಪಿ.ಸಿ.ಐ ಮ್ಯಾಪಿಂಗ್ ಮಾಡಿಸಬೇಕು. ತಪ್ಪಿದ್ದಲ್ಲಿ ಪಿಂಚಣಿ ಸೇವೆ ರದ್ದುಗೊಳ್ಳಲಿದೆ ಎಂದು ಚಾಮರಾಜನಗರ ತಹಶೀಲ್ದಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *