ಹರದನಹಳ್ಳಿಯ ನಾಡಕಚೇರಿಯಲ್ಲಿ 77ನೇ ಸ್ವಾತಂತ್ರ್ಯೋತ್ಸವ ಆಚರಣೆ

ಚಾಮರಾಜನಗರ: ನಗರದ ಸಮೀಪದ ಹರದನಹಳ್ಳಿ ಗ್ರಾಮ ಪಂಚಾಯ್ತಿಯ ನಾಡ ಕಚೇರಿಯಲ್ಲಿ ೭೭ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು ಆಚರಿಸಲಾಯಿತು.

ಧ್ವಜಾರೋಹಣದ ನಂತರ ಉಪ ತಹಸೀಲ್ದಾರ್ ಮಹದೇವಪ್ಪ ಮಾತನಾಡಿ, ಸಾವಿರಾರು ಜನರ ತ್ಯಾಗ, ಬಲಿದಾನಗಳ ಫಲವಾಗಿ ಇಂದು ನಾವು ಸ್ವಾತಂತ್ರ್ಯದ ಹಕ್ಕನ್ನು ಪಡೆದಿದ್ದೇವೆ. ಪ್ರಾಣದ ಹಂಗು ತೊರೆದು ದಾಸ್ಯದ ಸಂಕೋಲೆಯಿಂದ ದೇಶವನ್ನು ಬಿಡುಗಡೆಗೊಳಿಸಲು ಹೋರಾಡಿದ ಎಲ್ಲ ಮಹಾನ್ ಚೇತನಗಳಿಗೂ ಗೌರವ ಪೂರ್ವಕ ನಮನ ಸಲ್ಲಿಸುತ್ತೇನೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಕಂದಾಯ ಅಧಿಕಾರಿ ಗುರು ಸಿದ್ದಪ್ಪಚಾರ್, ಗ್ರಾಮ ಲೆಕ್ಕಾಧಿಕಾರಿ ವೆಂಕಟೇಶ್, ನಾಗರಾಜು, ಜಯರಾಮು, ಸುನಿಲ್, ಮಹೇಶ್, ಗ್ರಾಮ ಸಹಾಯಕರ ಸಂಘದ ಅಧ್ಯಕ್ಷ ನಾರಾಯಣಸ್ವಾಮಿ, ಹಾಗೂ ಸಂಘದ ಪದಾಧಿಕಾರಿಗಳು ಇನ್ನಿತರಿದ್ದರು.

Leave a Reply

Your email address will not be published. Required fields are marked *